ಭಾನುವಾರ, ಸೆಪ್ಟೆಂಬರ್ 27, 2009

ಮೊದ ಮೊದಲ್ ಓದಿದ ಗಣೇಶಯ್ಯ ಪುಸ್ತಕ

ಸಮರಸದ "ಪುಸ್ತಕ ಪ್ರೀತಿ" ವಿಭಾಗದಲ್ಲಿ ರವೀಶ, ಗಣೇಶಯ್ಯನವರ ಹೊಸ ಕಾದಂಬರಿ "ಕರಿಸಿರಿಯಾನ" ದ ಪರಿಚಯ ಮಾಡಿಕೊಡುತ್ತಾರೆ.

ಕರಿಸಿರಿಯಾನ - ಒ೦ದು ರೋಮಾ೦ಚಕ ಓದು


>karisiriyaana_k_n_ganeshayya_bookcover

ಗೆಳೆಯ ಗುರುಪ್ರಸಾದ್ ನನಗೆ ಕೆ.ಎನ್.ಗಣೇಶಯ್ಯನವರ ’ಕಪಿಲಿಪಿಸಾರ’ ಕಾದ೦ಬರಿಯ ಬಗ್ಗೆ ತಿಳಿಸಿದ್ದ. ಹಾಗಾಗಿ ಗಣೇಶಯ್ಯನವರ ಬಗ್ಗೆ ಮೊದಲೇ ತಿಳಿದಿದ್ದಿದರಿ೦ದ ’ಕರಿಸಿರಿಯಾನ’ ಕಾದ೦ಬರಿ ಬಿಡುಗಡೆ ಸಮಾರ೦ಭಕ್ಕೆ ಹೋಗಿ ಪುಸ್ತಕ ಕೊ೦ಡು ಬ೦ದೆ. ಕಾದ೦ಬರಿಯ ಬಗ್ಗೆ ಅತೀವ ನಿರೀಕ್ಷೆಗಳಿದ್ದ ನನಗೆ ಅದು ನಿರಾಶೆಯನ್ನು೦ಟು ಮಾಡಲಿಲ್ಲ. ಕೆಲವು ಕಡೆ ಕಾವ್ಯಮಯವಾಗಿ ಉಲ್ಲೇಖಿಸುವ೦ತೆ, ಕಾದ೦ಬರಿಯು ಕುತೂಹಲ ಕೆರಳಿಸುತ್ತಾ, ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಾ, ಓದಿಸಿಕೊ೦ಡು ಹೋಗುತ್ತದೆ.

ಈ ಕಾದ೦ಬರಿಯು ಒ೦ದು ಕಾಲ್ಪನಿಕ ಕತೆ. ಆದರೆ ಇದರಲ್ಲಿ ಬರುವ ಎಲ್ಲಾ ವಿವರಗಳು ಕಾಲ್ಪನಿಕವಲ್ಲ. ದಕ್ಷಿಣ ಭಾರತದ ಇತಿಹಾಸದ ಹಲವು ರಹಸ್ಯಗಳು ಇಲ್ಲಿ ತೆರೆದುಕೊಳ್ಳುತ್ತವೆ. ಕಾದ೦ಬರಿ ಮೂಲ ವಸ್ತು : ವಿಜಯನಗರ ಸಾಮ್ರಾಜ್ಯದ ಬೀದಿ ಬೀದಿಗಳಲ್ಲಿ ತಕ್ಕಡಿಗಳಲ್ಲಿ ಮಾರುತ್ತಿದ್ದರೆನ್ನಲಾದ ಮುತ್ತು, ರತ್ನ, ವಜ್ರ ಮು೦ತಾದ ನವರತ್ನಗಳು ಎಲ್ಲಿ ಹೋದವು? ವಿಜಯನಗರದ ಅಗಾಧ ನಿಧಿಯು ಎಲ್ಲಿ ಕಳೆದು ಹೋಯಿತು? ಮುಂದೆ ಓದಿ..

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ