ಶನಿವಾರ, ಆಗಸ್ಟ್ 21, 2010

ಸಚಿವನ ಕಾರಿಗೆ ಅಡ್ಡ ಬಂದ ಹಸುವಿಗೆ ಚಿತ್ರಹಿಂಸೆ, ಸಾವು! ’ಗೋಹತ್ಯಾ ನಿಷೇಧ ಕಾಯಿದೆ’ಗೆ ತಿದ್ದುಪಡಿ ಚಿಂತನೆ!

ನೆಲಮಂಗಲದ ಬೈಪಾಸ ರಸ್ತೆಯ ಬಳಿ ಧಾವಿಸುತ್ತಿದ್ದ ಮಾನ್ಯ ಸಚಿವ ಬಚ್ಚಾ ಗೌಡನ ಕಾರಿಗೆ ಅಡ್ಡ ಬಂದದ್ದರಿಂದ, ಚಿತ್ರ ಹಿಂಸೆ ಅನುಭವಿಸಿ ಸಾವಿಗೀಡಾದ ದನದ ದಾರುಣ ಕಥೆ, ಸ್ವಲ್ಪ ತಡವಾಗಿ ಬೆಳಕಿಗೆ ಬಂದಿದೆ. ನೆಲಮಂಗಲ ಬ್ಯೂರೋ ಇಂದ ಸಮರಸ ಠೀವಿಯ ಭಾತ್ಮೀದಾರ, ಹೈಬ್ರಿ ಜೆರ್ಸಿ ವರದಿ ಕೊಟ್ಟಿದ್ದಾರೆ. ಮುಂದೆ ಓದಿ.

ನಡೆದದ್ದು ಹೀಗೆ, ತುಮಕೂರು ಸಮೀಪದ ಪ್ರಸಿದ್ಧ ಮಠದಲ್ಲಿ ಗೋಹತ್ಯಾ ನಿಷೇಧದ ಬಗ್ಗೆ ಭಾಷಣ ಮಾಡಲು ತೆರಳುತ್ತಿದ್ದಾಗ, ನೆಲಮಂಗಲದ ಬೈಪಾಸ್ ಬಳಿ ಒಂದು ಸೀಮೆ ಹಸು ಮಾನ್ಯ ಸಚಿವ ಬಚ್ಚಾ ಗೌಡರ ಕಾರಿಗೆ ಅಡ್ಡ ಹಾದು ಹೋದದ್ದರಿಂದ ಕಾರು ಚಲನೆಯಲ್ಲಿ ನಿದಾನವಾಗಿ, ನಿಲ್ಲಿಸಬೇಕಾದ ಸಂದರ್ಭ ಒದಗಿತು. ತಕ್ಷಣ ಕೆಳಗಿಳಿದ ಕಾರಿನ ಚಾಲಕ, ಈ ಹಿಂದಿನಂತೆ ಕೆಟ್ಟದಾಗಿ ವರ್ತಿಸದೆ, ರಸ್ತೆ ದಾಟಿ ನಿಂತಿದ್ದ ದನಕ್ಕೆ ನಯವಾಗಿ “ಏಯ್ ದನ ಕಣ್ಣ ಕಾಣಕ್ಕಿಲ್ವ, ಮಿನಿಸ್ಟ್ರು ಕಾರ್ ಬತ್ತಾ ಐತೆ ಅಂತ” ಕೇಳಿದ್ದಾಗ್ಯೋ, ಉತ್ತರಿಸದೆ ತನ್ನ ಪಾಡಿಗೆ ತಾನು ಮೆಲುಕು ಹಾಕಿಕೊಂಡು ಶಾಂತವಾಗಿ ನಿಂತಿದ್ದ ದನದವನ್ನು ಕಂಡು ಕೆರಳಿದ ಮಾನ್ಯ ಸಚಿವ ಬಚ್ಚಾ ಗೌಡರು ಕೆರಳಿ, ದನದ ಮೂಗು ದಾರವನ್ನು ಜಗ್ಗಿಸಿದ್ದಲ್ಲದೆ, ದನದ ಬಾಲವನ್ನು ಹಿಡಿದು ಜಗ್ಗಿಸಿ, ಬಾರುಗೋಲಿನಿಂದ ಹಿಗ್ಗಾ ಮುಗ್ಗ ಥಳಿಸಿದರೆಂದು ’ಪ್ರತ್ಯಕ್ಷ-ದನಗಳಿಂದ’ ತಿಳಿದು ಬಂದಿದೆ. ಅಲ್ಲದೆ ’ದನ ಕಾಯವ್ನೆ’ ಎಂದು ಮಾನವನ ಜಾತಿಗೆ ಹೋಲಿಸಿ ಆ ದನಕ್ಕೆ ಅವಾಚ್ಯವಾಗಿ ಬೈದರೆಂದೂ ಸುದ್ದಿ ಬಂದಿದೆ. ಥಳಿತದಿಂದ ಗಾಯಗೊಂಡ ದನ ಸ್ವಲ್ಪ ಸಮಯದ ನಂತರ ಅಸು ನೀಗಿತೆಂದೂ ತಿಳಿದು ಬಂದಿದೆ.
ಮುಂದೆ ಓದಿ