ಶುಕ್ರವಾರ, ಡಿಸೆಂಬರ್ 30, 2011

ಅಂಚೆ ಅಂಟು ಪರದೆ ನಂಟು - ಪುಸ್ತಕ ಬಿಡುಗಡೆ


ಆಕೃತಿ ಪುಸ್ತಕ - ರಾಜಾಜಿನಗರ

www.akrutibooks.com

ಶಂಖನಾದ ಖ್ಯಾತಿಯ ಉಮೇಶ್ ಕುಲಕರ್ಣಿ ಅವರ
"ಅಂಚೆ ಅಂಟು ಪರದೆ ನಂಟು"
ಚಲನಚಿತ್ರರಂಗದ ಪಿತಾಮಹನಿಂದ ಅಣ್ಣನವರೆಗೆ
ಪುಸ್ತಕ ಲೋಕಾರ್ಪಣೆ

31-12-2011 ಶನಿವಾರ
ಬೆಳಗ್ಗೆ ೧೧ ಘಂಟೆಗೆ

ಪ್ರೆಸ್ ಕ್ಲಬ್ ಸಭಾಂಗಣ
ಕಬ್ಬನ್ ಪಾರ್ಕ್
ಬೆಂಗಳೂರು

ಅಂದು ನಮ್ಮೊಂದಿಗೆ

ಅಧ್ಯಕ್ಷತೆ ಮತ್ತು ಪುಸ್ತಕ ಬಿಡುಗಡೆ:
ಶ್ರೀ ವಿ. ಕೆ. ಮೂರ್ತಿ
ಖ್ಯಾತ ಸಿನಿ ಛಾಯಾಗ್ರಾಹಕ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ

ಮುಖ್ಯ ಅಥಿತಿ:
ಡಾ| ಸಂಗೋರಾಮ್
ಅಧ್ಯಕ್ಷರು,
ಕರ್ನಾಟಕ ಅಂಚೆ ಚೀಟಿ ಸಂಗ್ರಹಕಾರರ ಸಂಘ

ಜೊತೆಗೆ
ವಿಶೇಷ ಆಹ್ವಾನಿತರಿಂದ ನಾಲ್ಕು ಮಾತು

ಎಲ್ಲರಿಗೂ ಆದರದ ಸ್ವಾಗತ

To buy this book...visit...
http://bit.ly/se67q2

ಪತ್ರಿಕಾ ಪ್ರಕಟಣೆ:
ಪುಸ್ತಕ ಲೋಕಾರ್ಪಣೆ

ಸಮಯ : 11 ಘಂಟೆಗೆ, ದಿನಾಂಕ : 31/12/2011 ಶನಿವಾರ, ಸ್ಥಳ : ಪ್ರೆಸ್ ಕ್ಲಬ್ ಸಭಾಂಗಣ, ಕಬ್ಬನ್ ಪಾರ್ಕ್,ಬೆಂಗಳೂರು

ಆಕೃತಿ ಪುಸ್ತಕ, ರಾಜಾಜಿನಗರ, ಬೆಂಗಳೂರು ಪ್ರಕಟಿಸಿರುವ, ಶಂಖನಾದ ಚಲನಚಿತ್ರ ಖ್ಯಾತಿಯ ಶ್ರ‍ಿ ಉಮೇಶ್ ಕುಲಕರ್ಣಿ ಬರೆದಿರುವ ಪುಸ್ತಕ "ಅಂಚೆ ಅಂಟು ಪರದೆನಂಟು - ಚಲನಚಿತ್ರದ ಪಿತಾಮಹನಿಂದ ಅಣ್ಣನವರೆಗೆ" ಕೃತಿಯನ್ನು ದಿನಾಂಕ 31/12/2011 ಶನಿವಾರ, ಬೆಳಗ್ಗೆ ೧೧ ಘಂಟೆಗೆ, ಪ್ರೆಸ್ ಕ್ಲಬ್ ಸಭಾಂಗಣ, ಕಬ್ಬನ್ ಪಾರ್ಕ್,ಬೆಂಗಳೂರು ಇಲ್ಲಿ ಲೋಕಾರ್ಪಣೆಯಾಗಲಿದೆ. ದಾದಾ ಸಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ, ಖ್ಯಾತ ಸಿನಿ ಛಾಯಾಗ್ರಾಹಕ ವಿ. ಕೆ. ಮೂರ್ತಿ ಅವರು ಅಧ್ಯಕ್ಷತೆ ವಹಿಸಿ, ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಡಾ| ಸಂಗೋರಾಮ್, ಅಧ್ಯಕ್ಷರು, ಕರ್ನಾಟಕ ಅಂಚೆ ಚೀಟಿ ಸಂಗ್ರಹಗಾರರ ಸಂಘ, ಇವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಎಲ್ಲರಿಗೂ ಆದರದ ಸ್ವಾಗತ



ಲೇಖಕರ ಬಗ್ಗೆ

ಬಹುಮುಖ ಪ್ರತಿಭೆಯ, ಪುಸ್ತಕದ ಲೇಖಕ ಶ್ರೀ ಉಮೇಶ್ ಕುಲಕರ್ಣಿ ಜನಿಸಿದ್ದು 1949 ರಲ್ಲಿ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆದು 1972 ರಲ್ಲಿ ಪುಣೆ "ಫಿಲ್ಮ್ ಅಂಡ್ ಟಿ ವಿ ಇನ್ಸ್ಟಿಟ್ಯೂಟ್" ನ ಸಂಕಲನ ವಿಭಾಗದಲ್ಲಿ ಡಿಪ್ಲೊಮೋ ಪದವಿ ಪಡೆದರು. ಶ್ರೀಯುತರು ಬಹಳಷ್ಟು ಕನ್ನಡ ಚಲನ ಚಿತ್ರಗಳಿಗೆ ಮುಖ್ಯ ಸಂಕಲನಕಾರರಾಗಿ ಸೇವೆ ಸಲ್ಲಿಸಿದ್ದಾರೆ. ಅಂತರಾಷ್ಟ್ರೀಯ ಖ್ಯಾತಿ ’ಘಟಷ್ರಾದ್ಧ’ ಚಲಚಿತ್ರಕ್ಕೂ ಮುಖ್ಯ ಸಂಕಲನಕಾರರಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ ತಾವೇ ಸ್ವತಃ ಮೂರು ಚಲನಚಿತ್ರಗಳನ್ನು (ಶಂಖನಾದ,ಉತ್ತರ ಭೂಪ, ಗಂಡುಗೂಳಿಗಳು) ನಿರ್ದೇಶಿಸಿದ್ದು, ಶಂಖನಾದ ಚಿತ್ರಕ್ಕೆ 1986 ರಲ್ಲಿ ರಾಷ್ಟ್ರ ಮಟ್ಟದ "ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ" ಪ್ರಶಸ್ತಿ ದೊರೆತಿದೆ. ಲೇಖಕರು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸುಮಾರು 10 ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿ, ಸಂಕಲಿಸಿದ್ದಾರೆ. ಸ್ವತಃ ಕಥೆಗಾರರೂ ಆಗಿರುವ ಉಮೇಶ್ ಕುಲಕರ್ಣಿ ಅವರ ಕಥೆಗಳು ಹಲವಾರು ಪತ್ರಿಕೆಗಳಲ್ಲಿ ಪ್ರಕಟವಾಗಿ, ಬಹುಮಾನಗಳನ್ನು ಪಡೆದಿವೆ. ಲೇಖಕರು, ಚಲನಚಿತ್ರ ನಿರ್ದೇಶಕ ಎನ್ ಲಕ್ಷ್ಮಿನಾರಯಣ ಅವರ ಚರಿತ್ರೆಯನ್ನು ನಿರೂಪಿಸಿದ ಪುಸ್ತಕ ಪ್ರಕಟಗೊಂಡು ಓದುಗರ ಮತ್ತು ವಿಮರ್ಶಕರ ಮನ್ನಣೆ ಪಡೆದಿದೆ. ಚಲಚಿತ್ರದಷ್ಟೇ, ಅಂಚೆ ಚೀಟಿ ಸಂಗ್ರಹ ಲೇಖಕರ ಬಹು ಒಲವಿನ ಹವ್ಯಾಸ.

ಪುಸ್ತಕದ ಬಗ್ಗೆ

ಒಂದು ದೇಶವನ್ನು ಸಮಗ್ರವಾಗಿ ಅರಿಯಬೇಕಾದರೆ, ಆ ದೇಶದ ಅಂಚೆ ಚೀಟಿಗಳನ್ನು ಅಧ್ಯಯನ ಮಾಡಿದರೆ ಸಾಕಂತೆ! ಭಾರತದಲ್ಲಿ ಚಲನಚಿತ್ರಗಳು ಆರಂಭವಾಗಿದ್ದು ಅಂಚೆ ಚೀಟಿ ಜನ್ಮ ತಳೆದ 60 ವರ್ಷಗಳ ನಂತರವೇ ಆದರೂ, ಕಳೆದ ನೂರು ವರ್ಷಗಳಲ್ಲಿ ಚಲಚಿತ್ರರಂಗ ಬೃಹತ್ ಆಗಿ ಬೆಳೆದಿದೆ. ಚಲನಚಿತ್ರ ಮತ್ತು ಚಲನಚಿತ್ರರಂಗಕ್ಕೆ ನಂಟಿರುವ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸುಮಾರು 80 ಅಂಚೆ ಚೀಟಿಗಳು ಬಿಡುಗಡೆಯಾಗಿವೆ. ಅದರಲ್ಲಿ ಚಲಚಿತ್ರರಂಗದ ಪಿತಾಮಹ ದಾದಾ ಸಾಹೇಬ್ ಫಾಲ್ಕೆಯದ್ದೂ ಒಂದು ಮತ್ತು ಕನ್ನಡ ಚಿತ್ರರಂಗದ ಅಣ್ಣ ಎಂದೇ ಖ್ಯಾತಿ ಪಡೆದ ಡಾ| ರಾಜಕುಮಾರ್ ಅವರದ್ದೂ ಒಂದು. ಚಲನಚಿತ್ರ ಪಿತಾಮಹನಿಂದ ಅಣ್ಣನವರೆಗೆ ಎಂಬ ಅಡಿಬರಹವಿದ್ದರೂ, "ಅಂಚೆ ಅಂಟು ಪರದೆ ನಂಟು" ಪುಸ್ತಕದಲ್ಲಿ ಸಿನೆಮಾಗೆ ಸಂಬಂಧಿಸಿದ 64 ವ್ಯಕ್ತಿಗಳ ಹಾಗೂ 5 ಸಂಸ್ಥೆಗಳ ವಿಹಂಗಮ ದೃಶ್ಯದ ದರ್ಶನವನ್ನು ಉಣ ಬಡಿಸಿದ್ದಾರೆ ಲೇಖಕ ಉಮೇಶ್ ಕುಲಕರ್ಣಿ ಅವರು. ಅಂಚೆ ಚೀಟಿಗಳನ್ನು ಕೇಂದ್ರದಲ್ಲಿಟ್ಟು ಚಲನಚಿತ್ರರಂಗದ ಮತ್ತು ಚಲನಚಿತ್ರ ರಂಗಕ್ಕೆ ಸೇವೆ ಸಲ್ಲಿಸಿದ ಮಹನೀಯರ ಇತಿಹಾಸವನ್ನು ನಿರೂಪಿಸಿರುವ ಈ ಪುಸ್ತಕ ಭಾರತೀಯ ಚಲನಚಿತ್ರ ರಂಗದಲ್ಲಿ ಮತ್ತು ಪುಸ್ತಕ ಪ್ರಪಂಚದಲ್ಲೇ ವಿಶಿಷ್ಟವಾದ ಹಾಗೂ ಚೊಚ್ಚಲ ಪ್ರಯತ್ನವೇ ಎನ್ನಬಹುದು! ಪುಸ್ತಕಕ್ಕೆ ಅಂತರ್ ರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಮುನ್ನುಡಿ ಇದೆ.

ಸೋಮವಾರ, ಸೆಪ್ಟೆಂಬರ್ 26, 2011

ಆಕೃತಿಯಲ್ಲಿ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಶ್ರೀ ಚಂದ್ರಶೇಖರ ಕಂಬಾರರ ಜೊತೆ ಸಂವಾದ ಮತ್ತು ಸನ್ಮಾನ



ಆಕೃತಿ ಪುಸ್ತಕ ರಾಜಾಜಿನಗರ
ಈ-ಕವಿ ಕ್ಯಾಲಿಫೋರ್ನಿಯಾ

ಪ್ರಸ್ತುತ ಪಡಿಸುವ
"ಹೇಳತೇನೆ ಕೇಳ"
ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಶ್ರೀ ಚಂದ್ರಶೇಖರ ಕಂಬಾರರ ಜೊತೆ ಸಂವಾದ ಮತ್ತು ಸನ್ಮಾನ

ಸಂವಾದದಲ್ಲಿ:
ಶ್ರೀ ಜಿ ಬಿ ಹರೀಶ್
ಶ್ರೀ ಎಂ ಎಸ್ ಮೂರ್ತಿ

27/09/2011 ಮಂಗಳವಾರ
ಸಂಜೆ 6 ರಿಂದ 7:30


ಸ್ಥಳ: ಆಕೃತಿ ಪುಸ್ತಕ ಮಳಿಗೆ
ನಂ 31/1, 12ನೇ ಮುಖ್ಯರಸ್ತೆ
3ನೇ ಬ್ಲಾಕ್, ರಾಜಾಜಿನಗರ
ಬೆಂಗಳೂರು-೫೬೦೦೧೦
ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಹತ್ತಿರ

ವಿವರಗಳಿಗಾಗಿ: 9886694580

ಎಲ್ಲರಿಗೂ ಆದರದ ಸ್ವಾಗತ

ಸೋಮವಾರ, ಆಗಸ್ಟ್ 29, 2011

ಆಕೃತಿ ಅಂತರ್ಜಾಲ ಕನ್ನಡ ಪುಸ್ತಕ ಮಳಿಗೆ (ಕನ್ನಡ ಬುಕ್ಸ್ ಸೆಲ್ಲಿಂಗ್ ಪೋರ್ಟಲ್) ಉದ್ಘಾಟನೆ ಮತ್ತು ಮೂರು ಪುಸ್ತಕಗಳ ಲೋಕಾರ್ಪಣೆ

ಆಕೃತಿ ಪುಸ್ತಕ ರಾಜಾಜಿನಗರ




ಆಕೃತಿ ಅಂತರ್ಜಾಲ ಕನ್ನಡ ಪುಸ್ತಕ ಮಳಿಗೆ (ಕನ್ನಡ ಬುಕ್ಸ್ ಸೆಲ್ಲಿಂಗ್ ಪೋರ್ಟಲ್) ಉದ್ಘಾಟನೆ
ಮತ್ತು
ಮೂರು ಪುಸ್ತಕಗಳ ಲೋಕಾರ್ಪಣೆ

೧. ಜನಾರಣ್ಯ (ಕಾದಂಬರಿ) - ಶಂಕರ್, (ಕನ್ನಡಕ್ಕೆ) ಗೀತಾ ವಿಜಯಕುಮಾರ್

೨. ಒಡಲಾಳದ ತಳಮಳ (ಸಣ್ಣ ಕಥೆಗಳು) - ಕೇಶವ ಕುಡ್ಲ

೩. ಮರದ ಮರ್ಮರ (ಮಕ್ಕಳ ನಾಟಕ) - ನಾರಾಯಣ ಕಂಗಿಲೆ

ಅಂದು ನಮ್ಮೊಂದಿಗೆ,
1. ಡಿ ಕೆ ಚೌಟ (ಖ್ಯಾತ ನಾಟಕಕಾರರು)
2. ಚಂದ್ರಶೇಖರ ಕಂಬಾರ (ಖ್ಯಾತ ಸಾಹಿತಿಗಳು)
3. ಸಾ ಶಿ ಮರಳಯ್ಯ (ಖ್ಯಾತ ಸಾಹಿತಿಗಳು)
4. ಪ್ರೇಮಾ ಭಟ್ (ಖ್ಯಾತ ಕಥೆಗಾರ್ತಿ)

ಎಂದು?
ಸೆಪ್ಟಂಬರ್ 4 , ಬೆಳಗ್ಗೆ 10:30 ಕ್ಕೆ

ಎಲ್ಲಿ?

ನಯನ ಸಭಾಂಗಣ
ಕನ್ನಡ ಭವನ
ಜೆ ಸಿ ರಸ್ತೆ
ಬೆಂಗಳೂರು

ಶನಿವಾರ, ಜೂನ್ 25, 2011

ಭೂಮಿಗುದುರಿತೆ ಜೀವ ಮತ್ತು ಇತರ ಪ್ರಶ್ನೆಗಳು - ಲೋಕಾರ್ಪಣೆ



ಮತ್ತೊಮ್ಮೆ, ಕೊನೆಯದಾಗಿ ಪ್ರೀತಿಯ ಆಗ್ರಹ, ಆಹ್ವಾನ.. ಪುಸ್ತಕ ಬಿಡುಗಡೆಗೆ ಬನ್ನಿ...


ಭೂಮಿಯ ಮೇಲೆ ಜೀವಬೀಜ ಬಿತ್ತನೆ ಹೇಗಾಯಿತು ಎಂಬ ಕೌತುಕದ ಭೂಮಿಗುದುರಿತೇ ಜೀವ? ಪ್ರಶ್ನೆಯಿಂದ ಇಲ್ಲಿನ ಲೇಖನ ಮಾಲೆ ಆರಂಭವಾಗುತ್ತದೆ. ಬೇರಾವುದೋ ಲೋಕದಿಂದ ಸೂಕ್ಷ್ಮಜೀವಿಗಳು ಬಂದು ಸೌರವ್ಯೂಹದ ಎಲ್ಲ ಗ್ರಹಗಳಿಗೆ ಜೀವಸಿಂಚನ ಮಾಡಿದವು (ಕೆಲವು ತಜ್ಞರ ಪ್ರಕಾರ ಈಗಲೂ ಮಾಡುತ್ತಿವೆ) ಎಂಬ ವಾದವನ್ನು ಒಪ್ಪಿಕೊಂಡರೆ ನಮ್ಮ ಭೂಮಿಯನ್ನು ಬಿಟ್ಟರೆ ಬೇರೆ ಯಾವ ಗ್ರಹದಲ್ಲೂ ಅವು ಬದುಕಿ ವಿಕಾಸವಾಗುತ್ತಿಲ್ಲವೇಕೆ ಎಂಬ ಪ್ರಶ್ನೆ ನಮ್ಮಲ್ಲಿ ಏಳುತ್ತದೆ. ಅದಕ್ಕೆ ಉತ್ತರ ರೂಪವಾಗಿ ಕೊನೆಯ ಲೇಖನವಿದೆ. ಜೀವಲೋಕದ ಈ ಆದಿ-ಅಂತ್ಯಗಳ ನಡುವೆ ಅರಿವಿನ ವಿರಾಟ್ ಜಗತ್ತನ್ನು ತೋರಿಸುವ ಇತರ ೨೫ ಆಸಕ್ತಿದಾಯಕ ಲೇಖನಗಳ ಸರಮಾಲೆ ಈ ಸಂಕಲದಲ್ಲಿದೆ. ಕೊನೆಗೊಂದು ವಿಶಿಷ್ಟ ಹಿನ್ನುಡಿಯೂ ಇದೆ. ಇಲ್ಲಿಂದ ಆರಂಭಿಸಿ ಅಲ್ಲಿಯವರೆಗೂ ಕ್ರಮಿಸಿ, ಅರಿವಿನ ಹೊಸಹೊಸ ಮಜಲುಗಳನ್ನು ಮುಟ್ಟಿ ಬರುವ ಅವಕಾಶ ಕನ್ನಡ ಓದುಗರಿಗಿದೆ.
---- ನಾಗೇಶ ಹೆಗಡೆ (ಭೂಮಿಗುದುರಿತೆ ಜೀವ? ಮತ್ತು ಇತರ ಪ್ರಶ್ನೆಗಳು ಪುಸ್ತಕ ಮುನ್ನುಡಿಯಿಂದ)


ಸೋಮವಾರ, ಜೂನ್ 20, 2011

"ಭೂಮಿಗುದುರಿತೆ ಜೀವ? ಮತ್ತು ಇತರ ಪ್ರಶ್ನೆಗಳು" ಕೃತಿ ಲೋಕಾರ್ಪಣೆ




ಕೊಳ್ಳೇಗಾಲ ಶರ್ಮ ಅವರ "ಭೂಮಿಗುದುರಿತೆ ಜೀವ? ಮತ್ತು ಇತರ ಪ್ರಶ್ನೆಗಳು" ಕೃತಿ ಲೋಕಾರ್ಪಣೆ ಮತ್ತು ಪೆನ್ ಸರ್ಕಲ್ ಗೌರವಾರ್ಪಣೆ

ಅಧ್ಯಕ್ಷತೆ : ಶ್ರೀ ನಾಗೇಶ ಹೆಗಡೆ
ಕೃತಿ- ಕರ್ತೃ ಪರಿಚಯ : ಶ್ರೀ ಸುಧೀಂದ್ರ ಹಾಲ್ದೊಡ್ಡೇರಿ
ಕೃತಿ ಲೋಕಾರ್ಪಣೆ : ಶ್ರೀ ಟಿ ಆರ್ ಅನಂತರಾಮು

ಪೆನ್ ಸರ್ಕಲ್ ಗೌರವಾರ್ಪಣೆ

ಪ್ರೊ ಜೆ ಆರ್ ಲಕ್ಷ್ಮಣರಾವ್
ಪ್ರೊ ಅಡ್ಯನಡ್ಕ ಕೃಷ್ಣಭಟ್
ಶ್ರೀ ಆರ್ ಎಸ್ ರಾಜಾರಾಮ್
(ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈ ಲಿ ಪರವಾಗಿ)

ಸನ್ಮಾನಿತರ ಪರಿಚಯ
ಶ್ರೀಮತಿ ಸುಮಂಗಲ ಮುಮ್ಮಿಗಟ್ಟಿ

ಕಾರ್ಯಕ್ರಮ ನಿರ್ವಹಣೆ
ಶ್ರೀ ಟಿ ಜಿ ಶ್ರೀನಿಧಿ

ನಿಮ್ಮ ನೆಜ್ಜಿನ ವಿಜ್ಞಾನ ಲೇಖಕರನ್ನೆಲ್ಲಾ ಒಟ್ಟಿಗೆ ಕಾಣಲು ಸದವಕಾಶ..
ನಾಲ್ಕು ವರೆಗೆ ಲಘು ಉಪಾಹಾರ ಇದೆ..
ದಯವಿಟ್ಟು ಜೊತೆಗೂಡಿ..


ನಯನ ಸಭಾಂಗಣ,
ಕನ್ನಡ ಭವನ,
ಜೆ ಸಿ ರಸ್ತೆ,
ಬೆಂಗಳೂರು - ೧,
ರವೀಂದ್ರ ಕಲಾಕ್ಷೇತ್ರದ ಪಕ್ಕ
ಸಂಜೆ ೫ ಕ್ಕೆ

ಮಂಗಳವಾರ, ಏಪ್ರಿಲ್ 19, 2011

ಬೆಂಗಳೂರು ಕರಗ ೨೦೧೧ ನೋಡಿದ್ದು


ಹಿನ್ನಲೆ!

ಬೆಂಗಳೂರು ಕರಗ ನೋಡಬೇಕೆನ್ನಿಸಿದ ಆಸೆಯ ಹಿಂದಿನ ಹಿನ್ನಲೆಯನ್ನು ಸಂಕ್ಷಿಪ್ತವಾಗಿ ತಿಳಿಸಿ ವಿಷಯಕ್ಕೆ ಬಂದುಬಿಡುತ್ತೇನೆ. ಒಮ್ಮೆ ಎಸ್ ಪಿ ರೋಡಿನಲ್ಲಿರುವ ಒಬ್ಬ ಸಿ ಡಿ ವಿತರಕನ ವಿಳಾಸ ಕೇಳಿದಾಗ ಅವ ಒಂದೇ ಮಾತಿನಲ್ಲಿ, ಧರ್ಮರಾಯನ ದೇವಸ್ಥಾನದ ಹಿಂಭಾಗ ಎಂದಿದ್ದ! ನಾನು ಆಶ್ಚರ್ಯದಿಂದ ಕೇಳಿದ್ದೆ, ಏನು ಸ್ವಾಮಿ ನಮ್ಮಲ್ಲಿ ಧರ್ಮರಾಯನಿಗೂ ದೇವಸ್ಥಾನವುಂಟೇ? ಅವ ತಿರುಗಿ ಪ್ರಶ್ನಿಸಿದ್ದ, ಎಷ್ಟು ವರ್ಷದಿಂದ ಬೆಂಗಳೂರಿನಲ್ಲಿದ್ದೀರೀ? ಯಾಕ್ರಿ.. ಬೇಕಾದಷ್ಟು ವರ್ಷದಿಂದ ಇಲ್ಲೇ ಇದ್ದೀನಿ.. ಬೆಂಗಳೂರು ಕರಗ ಅಂತ ಒಂದು ನಡೆಯುತ್ತೇ ಗೊತ್ತಾ ಅಂದ.. ಓ ಗೊತ್ತು ಅಂದಿದ್ದೆ. ಕರಗ ಶುರು ಆಗೋದೇ, ಧರ್ಮರಾಯನ ದೇವಸ್ಥಾನದಿಂದ ಗುರು.. ಕರಗ ಅಂತ ಹೊತ್ತುಕೊಳ್ಳೋದು ದ್ರೌಪದಿಯನ್ನೇ ಅಂದಿದ್ದ! ಓ! ಎಂದು ಉದ್ಗಾರ ತೆಗೆದು.. ಈ ಬಾರಿ ಹೇಗಾದರೂ ಕರಗವನ್ನು, ನಡೆಯುವ ಸ್ಥಳದಲ್ಲೇ ಕಣ್ಣಾರೆ ನೋಡೇ ಬಿಡಬೇಕು ಎಂದುಕೊಂಡಿದ್ದವನಿಗೆ ಇಂದು ದಿನಪತ್ರಿಕೆಯಲ್ಲಿ ಕರಗ ನಡೆಯುವ ಸುದ್ದಿ ತಿಳಿದು ಗೆಳೆಯನ್ನು ಬಲವಂತಿಸಿ ಎಳೆದೊಯ್ದೆ!



ಯಡ್ಡಿ ಬೆದರಿದ್ದು!

ಕರಗ ಪ್ರಾರಂಭವಾಗುವ ಸಮಯ ತಿಳಿಯದ ನಾವು ೧೦: ೩೦ ಕ್ಕೇ ಧರ್ಮರಾಯನ ದೇವಸ್ಥಾನದ ಹತ್ತಿರ ತಲುಪಿದಾಗ ಒಡೆಯರ್ ವಂಶಸ್ಥದ ಶ್ರೀಕಂಠದತ್ತ ಒಡೆಯರ್ ದೊಡ್ಡದಾದ ಒಂದು ಕಾರಿನಲ್ಲಿ ಹಿಂತಿರುತ್ತಿದ್ದರು. ಕರಗ ನೋಡಲು ಹೋಗಬೇಕೆಂಬುದರ ಹಿನ್ನಲೆಯಲ್ಲಿ ಇನ್ನೊಂದು ಗುಪ್ತ ಆಸೆಯೂ ಇತ್ತು. ಅದು ಇಂದು ಕರಗಕ್ಕೆ ಯಡೆಯೂರಪ್ಪನವರು ಚಾಲನೆ ನೀಡುತ್ತಾರೆಂಬ ಸುದ್ದಿ. ಕರಗ ಹೊರುವವನ ಮೈಮೇಲೆ ದೇವರು ಬರುವುದೆಂದು ಕೇಳಿದ್ದೇನೆ. ಕರಗ ಹೊರುವವನು ಇದನ್ನು ರಾಜ್ಯದ ಅನುಕೂಲಕ್ಕೆ ಬಳಸಿ ಯಡ್ಡಿಯವರಿಗೆ ಒಮ್ಮೆ ಗುಮ್ಮಿ, ಎಲ್ಲಾ ಜಮೀನು ವಾಪಸು ಕೊಡು, ರಾಜಿನಾಮೆ ಕೊಡು, ಇಲ್ಲಾ ಅಂದ್ರೆ ನಾನು ಸುಮ್ನೆ ಇರಲ್ಲಾ! ಎಂಬ ದೇವಿಯ ಸುವಾರ್ತೆಯನ್ನು ಹೇಳುವವನೋ ಎಂಬ ಒಂದು ಸಣ್ಣ ಆಸೆ ಕೂಡ! ಹಾಗೇನೂ ಆಗಲಿಲ್ಲ. ಕನಿಷ್ಟ ರಥಕ್ಕೆ ಎಸೆಯುವ ಬಾಳೆಯ ಹಣ್ಣಗಳು ಯಡ್ಡಿಯವರ ಕಡೆ ತಿರುಗುವವೋ ಏನೋ ಎಂಬ ಒಂದು ಸಣ್ಣ ಸಂಶಯ ಕೂಡ ಇತ್ತು! ಇಂತಹ ಕೆಲವು ಪ್ರಯತ್ನಗಳು ನಡೆದವಾದರೂ ರಥಕ್ಕೆ ಬಿದ್ದ ಬಾಳೆಹಣ್ಣುಗಳ ಸಂಖ್ಯೆಗೆ ಹೋಲಿಸಿದರೆ, ಯಡ್ಡಿ ಕಡೆ ತಿರುಗಿದ ಬಾಳೆಹಣ್ಣುಗಳು ಕಡಿಮೆಯೇ. ಯಡ್ಡಿ ದೇವಸ್ಥಾನಕ್ಕೆ ಬಂದಾಗ ಪ್ರಸನ್ನಚಿತ್ತರಾಗಿ ಕಂಡರಾದರೂ, ಕರಗದ ಸುತ್ತಾ ಖಡ್ಗ ಹಿಡಿಯುವ ಯುವಕರನ್ನು ನೋಡಿ ಸ್ವಲ್ಪ ಬೆದರಿದಂತೆ ಕಂಡು ಬಂದರು. (ಎಲ್ಲಿ ಬಂದರೂ ನನ್ನ ವಿರುದ್ಧ ಕತ್ತಿ ಮಸೆಯುವವರೇ ಎನ್ನಿಸಿರಬೇಕು!)




ಅವರವರ ಭಕುತಿಗೆ! ಅವರವರ ಭಾವಕ್ಕೆ!

ಏನು ಜನ ಅಂತೀರಾ? ಅಬ್ಬಬ್ಬಾ.. ಆದರೂ ಟೀ ಮಾಡುವವ ಈ ಸಾರ್ತಿ ಜನಾನೆ ಇಲ್ಲಾ ಸಾರ್. ಇನ್ನೂ ಇನ್ನೂರೇ ಟೀ ಖರ್ಚಾಗಿರೋದು ಅನ್ನೋದೆ! ಇರಲಿ. ನನಗಂತೂ ಕರಗವನ್ನು ಆದಷ್ಟೂ ಹತ್ತಿರದಿಂದಲೇ ನೋಡಬೇಕೆಂದು ಹೋದವನಿಗೆ, ಇಕ್ಕಟ್ಟಿನಲ್ಲಿ ಜಜ್ಜಿ ಹೋಗಿದ್ದೆ. ಬೆರೆತ ಬೆವರಿನ ವಾಸನೆ, ಕೆಲವರ ವ್ಯಯಕ್ತಿಕ ಪರಮಾತ್ಮನ ವಾಸನೆಯಲ್ಲಿ ತೇರಿನ ಮೇಲೆ, ಕರಗದ ಮೇಲೆ ಎಸೆಯುತ್ತಿದ್ದ ಮಲ್ಲಿಗೆ ವಾಸನೆ ಎಲ್ಲಿ ಬೀರಬೇಕು? ಯಾರೋ ಒಬ್ಬ.. "maccha we go upstairs Daa.. we should not miss the part when god resists come out of the temple Daa.." ಎಂದದ್ದು ನನಗೆ ಕೇಳಿಸಿ, ಹೀಗೂ ಉಂಟೆ ಎನ್ನಿಸಿತು! ಧರ್ಮದೇವರಯನ ದೇವಸ್ಥಾನದ ಎದುರಿಗಿದ್ದ ಅಂಗಡಿಯವನಿಗೆ ವ್ಯವಹಾರವೇ ದೇವರು, ಅದೇ ಪೂಜೆ. ರಾತ್ರಿಯೆಲ್ಲಾ ಅಂಗಡಿಯಲ್ಲಿ ಭರ್ಜರಿ ವ್ಯಾಪಾರ. ಅಂಗಡಿಯಲ್ಲಿ ವ್ಯಾಪಾರ ಮಾಡುವಾಗ, ಅಂಗಡಿ ಮುಂದೆ ಬಂದು ಯಾರಾದರೂ ನಿಂತರೆ, ಅವರಿಗೆ ನಿರಂತರ ಮಂತ್ರಗಳ ಸುರಿಮಳೆ. ಯಾರೋ ಭಲಿಷ್ಟ ಭಕ್ತಾದಿಗಳು ಬಂದು ಅಂಗಡಿ ಮುಂದೆ ನಿಂತಾಗ, ಮಂತ್ರಗಳು ಅಪ್ಪ, ಅಣ್ಣ, ಜಾತಿ ಎಲ್ಲವನ್ನೂ ಆರಾಧಿಸುವಂತಹವು! ಕೊನೆಗೆ ಕೈ ಕೈ ಮಿಲಾಯಿಸುವ ಹಂತಕ್ಕೂ ಹೋಗಿ, ಅದು ಹೇಗೋ ನಿಂತು ಹೋಯಿತು! ಯಾರೋ ಒಬ್ಬ, ಒಬ್ಬಳು ಹೆಂಗಸನ್ನು ದೂಡಿ ಹೋದಾಗ, ಆ ಹೆಂಗಸಿಂದ ’ಲೋಫರ್ ಕಚಡ ನಿನಗೆ ಅಕ್ಕ ತಂಗಿ ಯಾರೂ ಇಲ್ಲವೇನೋ’ ಎಂಬ ಬೈಗುಳ! ಯಾರೋ ಒಬ್ಬ, ಕತ್ತಿ ಹಿಡಿದ ಅರೆಬೆತ್ತಲೆ ಭಕ್ತಾದಿಯನ್ನು ದೂಡಿದ ಎಂದು, ಅವ ಇನ್ಯಾರೋ ಒಬ್ಬನಿಗೆ ಪಟ ಪಟ ಭಾರಿಸಿಯೇಬಿಟ್ಟ. ಇದೇ ಅವಕಾಶವನ್ನು ಬಳಸಿಕೊಂಡ ಕತ್ತಿ ಹಿಡಿದ ಇತರೆ ಅರೆಬೆತ್ತಲೆ ಯುವಕರು, ಸಾಮಾನ್ಯ ಧಿರಿಸಿನಲ್ಲಿದ್ದ ಬೇರೆ ಭಕ್ತಾದಿಗಳನ್ನೆಲ್ಲಾ ಭಲಿಷ್ಟವಾಗಿ ಅತ್ತಿತ್ತ ದೂಡಿ ಹಾಕಿ ತಮ್ಮ ತಾಕತ್ತನ್ನು, ದರ್ಪವನ್ನೂ ತೋರಿಸಿದ್ದೂ ಕೂಡ ವಿಷೇಷ. ಬಹುಷಃ, ಕರಗ ಹೊತ್ತವನ ಹಿಂದೆ ಇಂತಹ ಭಲಿಷ್ಟ, ಧಾಂಡಿಗ ಭಕ್ತಾದಿಗಳೇ ಬೇಕೇನೋ! ಇನ್ನೂ ಅಲ್ಲೇ ಪಕ್ಕದಲ್ಲಿದ್ದ ಪಡ್ಡೆ ಹುಡುಗರ ಗುಂಪೊಂದು, ಯಡ್ಡಿ, ಶೋಭಕ್ಕನಿಗೂ ಜೈಕಾರ ಹಾಕಿದ್ದೇ! ಅಲ್ಲೇ ಇದ್ದ ಪೋಲೀಸ್ ಹೆಂಗಸಿನ ಧಿರಿಸಿನ ಮೇಲೂ ಕಮೆಂಟಗಳ ಸುರಿಮಳೆ! ಕರಗ ದೇವಾಲಯದಿಂದ ಹೊರಬಿದ್ದಾಗ ಪಟಾಕಿಗಳೂ ಸುಟ್ಟವು. ಒಂದೆರಡು ಪಾರಿವಳಗಳು ಘಂಟೆಯ ಶಬ್ದಕ್ಕೇನೋ, ಬೆಳಗಾಯಿತೇನೋ ಎಂದು ಬೆದರಿ ಮೇಲೆ ಹಾರಿ ಹೋದವು. ಅವಗಳೂ ಪ್ರಸಾದ ಉದುರಿಸಿದವೇನೋ! ಕರಗ ಹೊತ್ತ ಮನುಷ್ಯ ಮಲ್ಲಿಗೆ ಹೂವಿನ ಅಲಂಕಾರದ ಮುಡಿಯಲ್ಲಿ ನೃತ್ಯ ಮಾಡುತ್ತಾ ಅತ್ತಿತ್ತ ಸುಳಿದಾಡುತ್ತಿದ್ದ! ಕೆಲವರು ಗೋವಿಂದಾ ಗೋವಿಂದಾ ಎನ್ನುತ್ತಿದ್ದರು. ಒಬ್ಬಾತ ತನ್ನ ಮೊಬೈಲ್ ಫೋನ್ ಬೀಳಿಸಿ, ಲೇ ಯಾರ್ಗಾದ್ರು ಮೊಬೈಲ್ ಫೋನ್ ಸಿಕ್ಕಿದ್ರೆ ಕೊಡ್ರೋ! ಸಾಕು ನೀವು ಕಿರಚಾಡಿದ್ದು ಎನ್ನುತ್ತಿದ್ದ. ಒಬ್ಬ ತನಗೆ ೧೧ ಘಂಟೆಯಿಂದ ನಿಂತು ನಿಂತು ಸಾಕಾಯಿತು. ತಲೆ ಸುತ್ತುತ್ತಿದೆ ಎಂದು ಕೂತ! ಇದಕ್ಕೂ ಮುನ್ನ ಹೆಚ್ಚು ಮನರಂಜನೆ ಕೊಟ್ಟಿದ್ದು, ರಥ ಹೊರಟಾಗ ಬಾಳೆಹಣ್ಣು ಎಸೆಯುವ ಆಟ. ಒಂದು ಬಾಲ್ಕನಿಯಿಂದ ಮತ್ತೊಂದು ಬಾಲ್ಕನಿಗೆ ಎಸೆದಾಡಿ, ಕೊನೆಗೂ ಬೇಸತ್ತು ರಥಕ್ಕೆ ಎಸೆಯುವುದು. ರಥದಲ್ಲಿ ಕುಳಿತ ಮಕ್ಕಳು ಬಾಳೆ ಹಣ್ಣಿನ ಎಸೆತವನ್ನು ತಪ್ಪಿಸಿಕೊಳ್ಳುವುದು. ನಾವು ಇವಗಳನ್ನು ತಪ್ಪಿಸಿಕೊಳ್ಳಲೇಬಾರದು! ಮತ್ತೊಬ್ಬ ಹೆಂಗಸು ಅಲ್ಲಿ ಆರ್ಭಟಿಸುತ್ತಿದ್ದಳು. ಕಮಿಟಿ ಅಂತ ಮಾಡಿದ ಮೇಲೇ ನಮ್ಮ ಜನಕ್ಕಾದರೂ ಕರಗ ನೋಡಲು ಒಳ್ಳೇ ಸೌಕರ್ಯ ಕೊಡಬೇಕೆ. ಎಲ್ಲಾ ಜನಾನು ಒಂದೇ ತರ ಆಗ್ಬಿಟ್ರೆ! ಅಬ್ಬಾ ಫೋನಗಳಲ್ಲಿ ಕ್ಯಾಮರಾ ಯಾಕೆ ಎನ್ನುವವರು, ಅದರ ಉಪಯುಕ್ತತೆ ಕಾಣಲು ಕರಗಕ್ಕೆ ಬರಲೇಬೇಕು! ಏನೋ ನನಗೆ ಕಂಡದ್ದಿಷ್ಟು. ಆದರೆ ಲಯ ವಾದ್ಯಗಳು ಇಲ್ಲದೇ ಇದ್ದದ್ದು ಸ್ವಲ್ಪ ಬೇಸರವಾಯಿತು! ತಮಟೆಯ ಶಬ್ದಕ್ಕೆ ಮಾರುಹೋಗುವುದರಿಂದಲೇ ನಾನು ಈ ಜಾತ್ರೆಗಳನ್ನು ಹೆಚ್ಚು ಇಷ್ಟಪಡುವುದು! ನಾವು ಯಾತಕ್ಕಾಗಿ ಹೋಗುತ್ತೇವೋ ಅಷ್ಟೇ ನಮಗೆ ದಕ್ಕುವುದೇನೋ! ಆದರೂ ಬಹಳಷ್ಟು ಮನರಂಜನೆ ಇತ್ತು. ಸಾಕಷ್ಟು ಖುಷಿ ಪಟ್ಟೆ. ನನಗೂ ತುಸು ಹೆಚ್ಚು ಭಕ್ತಿಯಿದ್ದರೆ, ಅಲ್ಲೆಲ್ಲಾದರೂ ಒಂಚೂರು ಭಕ್ತಿ ಕಾಣಿಸುತ್ತಿತ್ತೇನೋ!

ಶನಿವಾರ, ಫೆಬ್ರವರಿ 26, 2011

ವರಕವಿ ಬೇಂದ್ರೆಯವರ ನಾಕುತಂತಿ ಕವನ - ಉಪನ್ಯಾಸ

ಗೆಳೆಯರೆ,

ಆಕೃತಿ ಪುಸ್ತಕ ಮಳಿಗೆ ರಾಜಾಜಿನಗರದಲ್ಲಿ, ಡಾ| ಜಿ. ಕೃಷ್ಣಪ್ಪ ಅವರಿಂದ
ವರಕವಿ ಬೇಂದ್ರೆಯವರ ನಾಕುತಂತಿ ಕವನದ ಮೇಲೆ ಒಂದು ಉಪನ್ಯಾಸ
ಹಾಗೂ ಬೇಂದ್ರೆಯವರ ಇತರ ಕವನಗಳ ಮೇಲೆ ಚರ್ಚೆ

ದಿನ: 27/ 02/ 2011 ಭಾನುವಾರ
ಸಮಯ: 10:30 ರಿಂದ 12:30

ವಿಳಾಸ : ಆಕೃತಿ ಪುಸ್ತಕ ಮಳಿಗೆ
ನಂ: 31/1, 12 ನೇ ಮುಖ್ಯರಸ್ತೆ,
3 ನೇ ಬ್ಲಾಕ್, ರಾಜಾಜಿನಗರ,
ಬೆಂಗಳೂರು - 560010

ಹತ್ತಿರದ ಗುರುತು: ಇ ಎಸ್ ಐ ಆಸ್ಪತ್ರೆ ಹತ್ತಿರ

ದಾರಿ ತಪ್ಪಿದರೆ ಕರೆ ಮಾಡಿ: 9886694580

ಬನ್ನಿ ಭಾಗವಹಿಸಿ..ಚರ್ಚಿಸಿ... ನಿಮ್ಮ ಗೆಳೆಯರನ್ನೂ ಕರೆತನ್ನಿ...

ಶುಕ್ರವಾರ, ಫೆಬ್ರವರಿ 04, 2011

ಕನ್ನಡ ಸಾಹಿತ್ಯ ಸಮ್ಮೇಳನದ ಪುಸ್ತಕ ಮಳಿಗೆ ಹಂಚಿಕೆಯಲ್ಲಿ ಅಕ್ರಮ

೨ಜಿ ತರಂಗಾಂರಗಳ ಹಂಚಿಕೆಯಲ್ಲಿ ಅಕ್ರಮ, ಕರ್ನಾಟಕದ ಮುಖ್ಯಮಂತ್ರಿ, ಮಂತ್ರಿಗಳ ಭೂಹಗರಣಗಳಷ್ಟು ಈ ಹಗರಣ ದೊಡ್ಡದಲ್ಲದಿದ್ದರೂ, ರಾಜಕಾರಣಿಗಳನ್ನು ತಿದ್ದಬೇಕಾಗಿರುವ ಈ ಅಕ್ಷರಲೋಕದ ಕೆಲವು ಗಣ್ಯರ ನೈತಿಕ ದೀವಾಳಿತನವನ್ನು ತೋರಿಸುತ್ತದೆ.,

ವಿಷಯ ಇಂತಿಷ್ಟು. ಬೆಂಗಳೂರಿನಲ್ಲಿ ಜರುಗುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಪುಸ್ತಕ ಪ್ರದರ್ಶನ ಮತ್ತು ಮಾರಟಕ್ಕೆ ಪುಸ್ತಕ ಮಾರಾಟಗಾರರಿಗೆ ಆಹ್ವಾನಿಸಿ ಕನ್ನಡ ಸಾಹಿತ್ಯ ಪರಿಷತ್ತು ಹೊರಡಿಸಿದ್ದ ಪತ್ರಿಕಾ ಪ್ರಕಟಣೆಯಲ್ಲಿ, ಒಬ್ಬರಿಗೇ ಒಂದೇ ಮಳಿಗೆ ಎಂದು ಪ್ರಕಟಿಸಲಾಗಿತ್ತು. ನಾನು ಮಳಿಗೆಗೆ ೨೦೦೦/- ದುಡ್ಡನ್ನು ನೀಡಿ ಹೆಚ್ಚುವರಿ ಒಂದು ಮಳಿಗೆ ಬೇಡಿಕೆಯಿತ್ತಾಗಲೂ ಅವರು ಹೊಡೆಸಿದ್ದ ನಿಯಮಗಳ ಸುತ್ತೋಲೆಯನ್ನು ನೀಡಿ ಹೆಚ್ಚುವರಿ ಮಳಿಗೆಯನ್ನು ನಿರಾಕರಿಸಿದ್ದರು.

ಇಂದು ಸಮ್ಮೇಳನದ ಜಾಗಕ್ಕೆ ತಲುಪಿದಾಗ ಅಲ್ಲಿನ ಚಿತ್ರಣವೇ ಬೇರೆ.
೧) ೨ ಮಳಿಗೆ, ಮೂರು ಮಳಿಗೆ, ಆರು ಮಳಿಗೆ ತೆರೆದಿದ್ದಾರೆ, ಕೆಲವು ಪುಸ್ತಕ ಮಾರಾಟಗಾರರು/ಪ್ರಕಾಶಕರು!
೨) ಈ ಒಂದಕ್ಕಿಂದ ಹೆಚ್ಚಿರುವ ಎಲ್ಲಾ ಮಳಿಗೆಗಳು ಮೂಲೆಯಿಂದಲೇ ಪ್ರಾರಂಭವಾಗುತ್ತವೆ!

ಸಾರ್ವಜನಿಕರು ಆಸ್ಥೆಯಿಂದ ನೋಡುತ್ತಿರುವ ಸಮ್ಮೇಳನದ ಒಂದು ಪ್ರಮುಖ ಅಂಗವಾದ ಪುಸ್ತಕ ಪ್ರದರ್ಶನವನ್ನು ಪಾರದರ್ಶಕವಾಗಿ ಅಯೋಜಿಸುವುದು ಅಷ್ಟೋಂದು ಕಷ್ಟವೇ? ದೊಡ್ಡ ಮಟ್ಟದಲ್ಲಿ ಬೆಳೆದಿರುವ ಪ್ರಕಾಶಕರ/ ಪುಸ್ತಕ ಮಾರಾಟಗಾರರ ಸ್ವತ್ತೇ ಈಗ ಸಾಹಿತ್ಯ ಸಮ್ಮೇಳನದ ಪುಸ್ತಕ ಪ್ರದರ್ಶನ?